ಸುಳ್ಯದಲ್ಲಿ ಇಂಟರಾಕ್ಟ್ ಕ್ಲಬ್ ಜಿಲ್ಲಾ ಸಮಾವೇಶ

December 15, 2019
10:20 PM

ಸುಳ್ಯ: ಸುಳ್ಯದ ರೋಟರಿ ಕ್ಲಬ್ ಮತ್ತು ಸುಳ್ಯದ ರೋಟರಿ ಕ್ಲಬ್ ಸಿಟಿ ಇವರ ಜಂಟಿ ಪ್ರಾಯೋಜಕತ್ವದಲ್ಲಿ ಮಿತ್ತಡ್ಕದ ರೋಟರಿ ವಿದ್ಯಾಸಂಸ್ಥೆಗಳ ವಠಾರದಲ್ಲಿ ಎರಡು ದಿನಗಳ ಇಂಟರಾಕ್ಟ್ ಕ್ಲಬ್‌ಗಳ ಜಿಲ್ಲಾ ಸಮಾವೇಶ `ಚಿನ್ನಾರಿ’ ನಡೆಯಿತು.

Advertisement

ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ರೋಟರಿ ಜಿಲ್ಲಾ ಗವರ್ನರ್ ಜೋಸೆಫ್ ಮ್ಯಾಥ್ಯೂ ‘ವಿದ್ಯಾರ್ಥಿ ದೆಸೆಯಲ್ಲಿಯೇ ನಾಯಕತ್ವವನ್ನು ಬೆಳೆಸಿಕೊಳ್ಳಲು ಇಂಟರಾಕ್ಟ್ ಪೂರಕವಾಗಿ ಕೆಲಸ ಮಾಡುತ್ತದೆ. ಆ ಮೂಲಕ ಸಮಾಜಮುಖಿಯಾಗಿ ತೊಡಗಿಸಿಕೊಳ್ಳಲು ಇದು ಸಹಕಾರಿಯಾಗುತ್ತದೆ ಎಂದು ಹೇಳಿದರು. ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿ ತುಷಾರ್ ಕೆ., ರೋಟರಿ ವಲಯ 5ರ ಅಸಿಸ್ಟೆಂಟ್ ಗವರ್ನರ್ ಡಾ. ಕೇಶವ ಪಿ.ಕೆ. ಜಿಲ್ಲಾ ಇಂಟರಾಕ್ಟ್ ಸಭಾಪತಿ ಡಾ. ಸೂರ್ಯನಾರಾಯಣ ಅತಿಥಿಗಳಾಗಿ ಭಾಗವಹಿಸಿದರು.

ಸುಳ್ಯ ರೋಟರಿ ಕ್ಲಬ್ ಅಧ್ಯಕ್ಷ ಡಾ.ಕೆ.ಜಿ. ಪುರುಷೋತ್ತಮ ಸ್ವಾಗತಿಸಿದರು. ಸಮಾವೇಶದ ಸಂಯೋಜಕ ಎನ್.ಎ.ಜಿತೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಳ್ಯ ಸಿಟಿ ಕ್ಲಬ್ ಅಧ್ಯಕ್ಷ ಭಾನುಪ್ರಕಾಶ್ ವಂದಿಸಿದರು. ವಿದ್ಯಾರ್ಥಿಗಳಾದ ದೃತಿ ಕೆ.ಹೆಚ್, ಸಂಹಿತಾ ವಿ.ಆರ್. ಕಾರ್ಯಕ್ರಮ ನಿರೂಪಿಸಿದರು. ಮುಖ್ಯ ಶಿಕ್ಷಕ ಅಚ್ಚುತ ಅಟ್ಲೂರು ಸಹಕಾರ ನೀಡಿದರು.
ಇಂಟರಾಕ್ಟ್ ಜಿಲ್ಲಾ ಉಪ ಸಭಾಪತಿ ನವೀನ್ ಕುಮಾರ್, ಸುಳ್ಯ ರೋಟರಿ ಕಾರ್ಯದರ್ಶಿ ಸನತ್, ಇಂಟರಾಕ್ಟ್ ಅಧ್ಯಕ್ಷೆ ಶ್ರಾವ್ಯ ಬೇರಿಕೆ, ಕಾರ್ಯದರ್ಶಿ ಮಹಿಮಾ ವೇದಿಕೆಯಲ್ಲಿದ್ದರು.
ಉದ್ಘಾಟನೆಯ ಬಳಿಕ ವ್ಯಕ್ತಿತ್ವ ವಿಕಸನ ಹಾಗೂ ಸಂವಹನ ಕಲೆ ವಿಷಯವಾಗಿ ಎಂ.ಬಿ.ಜಯರಾಮರು ಮಾಹಿತಿ ನೀಡಿದರು.

ಡಿ.14ರಂದು ಆರಂಭಗೊಂಡ ಸಮಾವೇಶದಲ್ಲಿ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳು ನಡೆಯಿತು. ಮಿಸೆಸ್ ಕರ್ನಾಟಕ ಪ್ರಶಸ್ತಿ ವಿಜೇತೆ ದೀಪಿಕಾ ಅಡ್ತಲೆ ಉದ್ಘಾಟನೆ ನೆರವೇರಿಸಿದರು.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಜ.26 | ಸಾರಡ್ಕದಲ್ಲಿ ಕೃಷಿ ಹಬ್ಬ | ವಿವಿಧ ಗೋಷ್ಠಿಗಳು |
January 25, 2025
5:01 PM
by: ದ ರೂರಲ್ ಮಿರರ್.ಕಾಂ
ಮಂಗಳೂರು | ಕದ್ರಿ ಉದ್ಯಾನದಲ್ಲಿ ಜ.23 ರಿಂದ  ಫಲಪುಷ್ಪ ಪ್ರದರ್ಶನ | 20 ಸಾವಿರಕ್ಕೂ ಅಧಿಕ ಹೂವಿನ ಗಿಡಗಳ ಪ್ರದರ್ಶನ |
January 11, 2025
7:18 AM
by: The Rural Mirror ಸುದ್ದಿಜಾಲ
ಡಿ. 29 | ಕುಂಬಳೆಯಲ್ಲಿ ಕಲಾವಿದ ಕುಂಬಳೆ ಶ್ರೀಧರ ರಾವ್ ಸ್ಮೃತಿ | ‘ಕಲಾ ಶ್ರೀಧರ’ ಕೃತಿ ಅನಾವರಣ |
December 26, 2024
11:28 AM
by: ದ ರೂರಲ್ ಮಿರರ್.ಕಾಂ
ನ.2 ರಿಂದ ಕಲರವ | ಹಕ್ಕಿ-ವನ್ಯ ಜೀವಿ – ಪಕೃತಿ ಛಾಯಾಚಿತ್ರ ಪ್ರದರ್ಶನ |
October 23, 2024
8:32 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group