ಸುಳ್ಯದಲ್ಲಿ ಇಳೆಗೆ ತಂಪೆರೆದ ಮಳೆ

April 24, 2019
12:01 PM

ಸುಳ್ಯ: ಕಡು ಬಿಸಿಲು ಮತ್ತು ಏರಿದ ತಾಪಮಾನದಿಂದ ಬೆಂದು ಬರಡಾಗಿದ್ದ ಇಳೆಗೆ ತಂಪೆರೆದು ಸುಳ್ಯದಲ್ಲಿ ಮಳೆಯ ಸಿಂಚನ. ಮಂಗಳವಾರ ಸಂಜೆ ಒಂದು ಗಂಟೆಗೂ ಹೆಚ್ಚು ಸಮಯ ಉತ್ತಮ ಮಳೆ ಸುರಿದಿದೆ. ಐದು ಗಂಟೆಯ ವೇಳೆಗೆ ಗುಡುಗು ಸಿಡಿಲಿನ ಅಬ್ಬರದೊಂದಿಗೆ ಧಾರಾಕಾರ ಮಳೆ ಸುರಿಯಿತು.
ಸುಳ್ಯ ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಮಳೆ ಸುರಿದು ತಂಪಾದ ವಾತಾವರಣ ಉಂಟಾಗಿದೆ. ಜೋಡುಪಾಲ, ಎರಡನೇ ಮೊಣ್ಣಂಗೇರಿ ಮತ್ತಿತರ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗಿದ್ದು ಪಯಸ್ವಿನಿ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಮಣ್ಣು ಮಿಶ್ರಿತ ಕೆಂಪು ನೀರು ನದಿಯಲ್ಲಿ ಹರಿದು ಬರುತಿದೆ. ಆದರೆ ಪಯಸ್ವಿನಿ ನದಿಯು ಕೇರಳ-ಕರ್ನಾಟಕದ ಗಡಿ ಭಾಗದಲ್ಲಿ ಬತ್ತಿ ಬರಡಾದ ಸ್ಥಿತಿಯಲ್ಲಿದ್ದು ನೀರಿನ ಬವಣೆ ಎದುರಾಗಿತ್ತು. ಇದೀಗ ಉತ್ತಮ ಮಳೆಯಾಗಿರುವ ಕಾರಣ ನದಿಯಲ್ಲಿ ನೀರಿನ ಹರಿವು ಹೆಚ್ಚಳವಾಗಿ ನೀರಿನ ಬವಣೆಗೆ ದೂರವಾಗಬಹುದು ಎಂಬ ನಿರೀಕ್ಷೆ ಉಂಟಾಗಿದೆ.

Advertisement
Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

Team the rural mirror

ಇದನ್ನೂ ಓದಿ

58ನೇ ಜ್ಞಾನಪೀಠ ಪ್ರಶಸ್ತಿ  ಪ್ರದಾನ | ಜಗದ್ಗುರು ರಾಮಭದ್ರಾಚಾರ್ಯ ಅವರಿಗೆ ಜ್ಞಾನಪೀಠ ಪ್ರಶಸ್ತಿ ಪ್ರದಾನ
May 17, 2025
10:22 PM
by: The Rural Mirror ಸುದ್ದಿಜಾಲ
ವಾಯುಭಾರ ಕುಸಿತ | ಕೇರಳದಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ | ಆರು ಜಿಲ್ಲೆಗಳಲ್ಲಿ ಎಲ್ಲೋ ಎಲರ್ಟ್‌ | ರಾಜ್ಯದಲ್ಲೂ ಮಳೆ ಸಾಧ್ಯತೆ |
May 17, 2025
8:27 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕ್ಷೇತ್ರದ ಸಮಸ್ಯೆಗಳ ಪರಿಹಾರಕ್ಕಾಗಿ ಸರಕಾರಗಳಿಂದ ರಚಿಸಲಾದ ಸಮಿತಿಗಳು ಏನು ಹೇಳಿವೆ..?
May 17, 2025
7:27 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಮೇ ಕೊನೆಯ ವಾರದಂದು ಈ ಐದು ರಾಶಿಯವರಿಗೆ ಶುಕ್ರ ದೆಸೆ
May 17, 2025
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group