ಸುಳ್ಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಬಂಡಾಯದ ಬಿಸಿ…!

May 16, 2019
9:13 PM

ಸುಳ್ಯ: ನಗರ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಇದೀಗ ಪಕ್ಷಗಳ ಒಳಗೆ ಬಿಸಿ ಬಿಸಿ ಚರ್ಚೆ ಆರಂಭವಾಗಿದೆ.

ಅಭ್ಯರ್ಥಿ ಆಕಾಂಕ್ಷಿಗಾಗಿದ್ದು ಟಿಕೆಟ್ ಸಿಗದವರು  ಪ್ರಮುಖ ನಾಯಕರ ಬೆಂಬಲದೊಂದಿಗೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ಅಬ್ದುಲ್ ರಹಿಮಾನ್ ಮೊಗರ್ಪಣೆ 6 ನೇ ವಾರ್ಡ್‍ನಿಂದ, ಮಹಮ್ಮದ್ ರಿಯಾಝ್ ಕಟ್ಟೆಕ್ಕಾರ್ 13ನೇ ವಾರ್ಡ್‍ನಿಂದ ಮತ್ತು ಆರ್.ಕೆ.ಮಹಮ್ಮದ್ 17ನೇ ವಾರ್ಡ್‍ನಿಂದ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿರುವುದು ಕಾಂಗ್ರೆಸ್‍ಗೆ ತಲೆ ನೋವು ತಂದಿದೆ. ಇವರು ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

10 ನೇ ವಾರ್ಡ್‍ನಲ್ಲಿ ಸುನಿಲ್‍ಕುಮಾರ್ ಕೆ.ಸಿ ಮತ್ತು 20ನೇ ವಾರ್ಡ್‍ನಲ್ಲಿ ಜಯಂತಿ ಆರ್ ರೈ ಪಕ್ಷೇತರರಾಗಿ ಸ್ಪರ್ಧಿಸುವುದು ಬಿಜೆಪಿಗೆ ತಲೆ ನೋವು ಸೃಷ್ಠಿಸಲಿದೆ. ಮಾಜಿ ನಗರ ಪಂಚಾಯತ್ ಅಧ್ಯಕ್ಷ ಎನ್.ಎ.ರಾಮಚಂದ್ರ ನೇತೃತ್ವದಲ್ಲಿ ಸುನಿಲ್‍ಕುಮಾರ್ ಮತ್ತು ಇತರ ಕಾರ್ಯಕರ್ತರು 10ನೇ ವಾರ್ಡ್‍ನಲ್ಲಿ ನಾಮಪತ್ರ ಸಲ್ಲಿಸಿ ಬಿಜೆಪಿಗೆ ಸಡ್ಡುಹೊಡೆದಿದ್ದಾರೆ. ಅದೇ ರೀತಿ ನಗರ ಪಂಚಾಯತ್ ಮಾಜಿ ಸದಸ್ಯ ರಮಾನಂದ ರೈ ಪತ್ನಿ ಜಯಂತಿ ಆರ್ ರೈ ನಾಮಪತ್ರ ಸಲ್ಲಿಸಿರುವುದು ಕೂಡ ಪಕ್ಷದ ಅಧಿಕೃತ ಅಭ್ಯರ್ಥಿಯ ಗೆಲುವಿಗೆ ಸಂಕಷ್ಠ ತರಲಿದೆ.

ಕಳೆದ ಬಾರಿ ಎಸ್.ಡಿ.ಪಿ.ಐ ಸದಸ್ಯರಾಗಿ ಆಯ್ಕೆಯಾಗಿದ್ದ ಕೆ.ಎಸ್.ಉಮ್ಮರ್ ಈ ಬಾರಿ 17ನೇ ವಾರ್ಡ್‍ನಲ್ಲಿ ಪಕ್ಷೇತರನಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇವರು ಎಸ್.ಡಿ.ಪಿ.ಐ ಮತ್ತು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಪೈಪೋಟಿ ನೀಡಲಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್
ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ
March 27, 2026
1:12 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror