ಸೂರ್ಯಗ್ರಹಣ ವೀಕ್ಷಣೆಯ ತವಕ ಹಲವು ಕಡೆ : ಮಾನಸಿಕ ನೆಮ್ಮದಿಗಾಗಿ ವಿವಿಧ ದೇವಸ್ಥಾನಗಳಲ್ಲಿ ಶಾಂತಿಹವನ

December 26, 2019
10:01 AM

ಮಂಗಳೂರು: ಸೌರಮಂಡಲದ ಅಪರೂಪದ ಕ್ಷಣಗಳು ಈಗ ಕಾಣುತ್ತಿವೆ. ಅತ್ಯಂತ ಅಪರೂಪ ಎನಿಸಿದ ಕಂಕಣ ಸೂರ್ಯಗ್ರಹಣ ಕರಾವಳಿ ಭಾಗದಲ್ಲಿ  ಸ್ಪಷ್ಟವಾಗಿ ಗೋಚರಿಸಿದೆ. ಬೆಳಗ್ಗೆ 8:06 ಕ್ಕೆ ಸಂಭವಿಸಿದ ಕಂಕಣ ಸೂರ್ಯಗ್ರಹಣ 11.11 ಕ್ಕೆ ಮುಕ್ತಾಯಗೊಳ್ಳಲಿದೆ. ಸೂರ್ಯ ಬಳೆ ರೀತಿಯಲ್ಲಿ ಸುಮಾರು 9.24 ರಿಂದ 9.29 ರವರೆಗೆ ಹಲವು ಕಡೆ ಕಂಡುಬಂದಿದೆ.  ಮಂಗಳೂರು ಸೇರಿದಂತೆ ಸುಳ್ಯ, ಪುತ್ತೂರು ಸೇರಿದಂತೆ ಜಿಲ್ಲೆಯಾದ್ಯಂತ ಸೂರ್ಯಗ್ರಹಣ ಗೋಚರಿಸುತ್ತಿದೆ. ಇದೇ ವೇಳೆ ಮಾನಸಿಕ ನೆಮ್ಮದಿಗಾಗಿ, ದೋಷ ನಿವಾರಣೆಗಾಗಿ ವಿವಿಧ ದೇವಸ್ಥಾನಗಳಲ್ಲಿ  ಶಾಂತಿ ಹವನ ನಡೆಯುತ್ತಿದೆ.

Advertisement
Advertisement

ಬಹಳ ಅಪರೂಪವಾದ ಈ ಸೂರ್ಯಗ್ರಹಣ  ಬೆಳಿಗ್ಗೆ 9 ರ ಸುಮಾರಿಗೆ ದರ್ಶನವಾಗಿದೆ. ಬಳಿಕ ಸ್ಪಷ್ಟವಾಗಿ ಗೋಚರಿಸುತ್ತಿದೆ.  ಈ ರೀತಿಯ ಸೂರ್ಯಗ್ರಹಣ ಆಕಾಶದಲ್ಲಿ ಕಾಣುವುದು ಮುಂದೆ 2064 ನೇ ವರ್ಷದಲ್ಲಿ.

ಕಂಕಣ ಸೂರ್ಯಗ್ರಹಣ ಏನಿದು  ? : ಸೂರ್ಯ, ಭೂಮಿಯ ಮಧ್ಯೆ ಚಂದ್ರ ಬಂದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಕಂಕಣ ಗ್ರಹಣದಲ್ಲಿ ಸೂರ್ಯನನ್ನು ಚಂದ್ರ ಪೂರ್ಣವಾಗಿ ಮರೆ ಮಾಡುವುದಿಲ್ಲ. ಗ್ರಹಣವಾದಾಗ ಚಂದ್ರನ ಸೂತ್ತಲೂ ಬೆಳಕು ತೂರಿ ಬಂದು ಹೊಳೆಯುವ ಬಂಗಾರದ ಬಳೆಯಾಕಾರದಲ್ಲಿ ಸೂರ್ಯ ಗೋಚರಿಸುತ್ತಾನೆ. ಭೂಮಿ, ಸೂರ್ಯ ಹಾಗೂ ಚಂದ್ರನ ನಡುವಿನ ಅಂತರಗಳ ಪ್ರಕಾರ ಸೂರ್ಯನ ಕೋನೀಯ ಗಾತ್ರವು ಚಂದ್ರನದಕ್ಕಿಂತ ದೊಡ್ಡದಾಗಿರುತ್ತದೆ. ಹಾಗಾಗಿ ಸೂರ್ಯ ಬಳೆಯಂತೆ ಗೋಚರಿಸುತ್ತಾನೆ. ಈ  ಕೌತುಕ  ತಮಿಳುನಾಡು, ಕೇರಳ, ಕರ್ನಾಟಕ ಭಾಗಗಳಲ್ಲಷ್ಟೇ  ದರ್ಶನ ಸಾಧ್ಯವಿದೆ.

ಶಾಂತಿಹವನ : ಸೂರ್ಯಗ್ರಹಣದಿಂದ ಮೂಲ ನಕ್ಷತ್ರ ಸೇರಿದಂತೆ ವಿವಿಧ ರಾಶಿಯವರಿಗೆ ದೋಚ ಇರುವುದರಿಂದ ವಿವಿಧ ದೇವಸ್ಥಾನಗಳಲ್ಲಿ  ಶಾಂತಿ ಹವನ ನಡೆಯಿತು. ಸುಳ್ಯ ತಾಲೂಕಿನ ವಳಲಂಬೆ ಶ್ರೀ ಶಂಖಪಾಲ  ಸುಬ್ರಹ್ಮಣ್ಯ ದೇವಸ್ಥಾನ, ಪಂಜ ಪಂಚಲಿಂಗೇಶ್ವರ ದೇವಸ್ಥಾನ, ಹರಿಹರ ದೇವಸ್ಥಾನ, ಬೆಳ್ಳಾರೆ, ಕಾಯರ್ತೋಡಿ, ತೊಡಿಕಾನ, ಕಾಂತಮಂಗಲ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ  ಶಾಂತಿ ಹವನ ನಡೆಯಿತು.

 

Advertisement

 

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ದಿಶಾಂತ್‌ ಕೆ ಎಸ್
July 23, 2025
7:46 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಪ್ರಣಮ್ಯ ಡಿ
July 23, 2025
7:39 AM
by: ದ ರೂರಲ್ ಮಿರರ್.ಕಾಂ
ಹವಾಮಾನ ಆಧಾರಿತ ಬೆಳೆ ವಿಮೆಗೆ ಸಮಸ್ಯೆ | ಮಳೆ ಮಾಪನ ಯಂತ್ರಗಳ ನಿರ್ವಹಣೆ ಅವ್ಯವಸ್ಥೆ ಸರಿಪಡಿಸಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನವಿ
July 23, 2025
7:21 AM
by: The Rural Mirror ಸುದ್ದಿಜಾಲ
ಅರಣ್ಯ ಪ್ರದೇಶದೊಳಗೆ ದನ-ಕರು, ಕುರಿ ಮೇಯಿಸುವುದಕ್ಕೆ ನಿಷೇಧ ಹೇರಿದ ಅರಣ್ಯ ಇಲಾಖೆ
July 23, 2025
7:09 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group