ಸೆ.14: ಬಾಳಿಲದಲ್ಲಿ ಜನ ಔಷಧಿ” ಮತ್ತು ” ಆಯುಷ್ಮಾನ್ ಭಾರತ್ “ಆರೋಗ್ಯ ಯೋಜನೆಗಳ ಮಾಹಿತಿ ಕಾರ್ಯಾಗಾರ

September 3, 2019
1:00 PM

ಬಾಳಿಲ: ಭಾರತ ಸರ್ಕಾರದ ” ಜನ ಔಷಧಿ” ಮತ್ತು ” ಆಯುಷ್ಮಾನ್ ಭಾರತ್ “ಆರೋಗ್ಯ ಯೋಜನೆಗಳ ಮಾಹಿತಿ ಕಾರ್ಯಾಗಾರ ಬಾಳಿಲದ ಆಶ್ರಮ ಶಾಲಾ ವಠಾರದಲ್ಲಿ ಸೆ.14 ಎಂದು ಮಧ್ಯಾಹ್ನ 2 ಗಂಟೆಗೆ ನಡೆಯಲಿದೆ. ಶ್ರೀ ಕೃಷ್ಣ ಸೇವಾ ಸಮಿತಿ ಬಾಳಿಲ ಮುಪ್ಪೇರ್ಯ ಆಶ್ರಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ  ಪುತ್ತೂರಿನ ಖ್ಯಾತ ಆಯುರ್ವೇದ ತಜ್ಞ ,ಪುರುಷರ ಕಟ್ಟೆಯ ಪ್ರಸಾದ್ ಹೆಲ್ತ್ ಕೇರ್ ಸೆಂಟರ್ ನ ವೈದ್ಯ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಇವರು ಮಾಹಿತಿಗಳನ್ನು ನೀಡಲಿದ್ದಾರೆ.

ಕೇಂದ್ರ ಸರಕಾರದ ಜನಪರ ಆರೋಗ್ಯ ಯೋಜನೆಗಳಲ್ಲಿ “ಜನ ಔಷಧಿ* “ಮತ್ತು ” ಆಯುಷ್ಮಾನ್ ಭಾರತ್” ಯೋಜನೆಗಳು ಬಡವರ ಪಾಲಿನ ಬಂಧುವಾಗಿ ಪರಿಣಮಿಸಿದೆ.ಆದರೆ ಈ ಯೋಜನೆಯ ಸರಿಯಾದ ಮಾಹಿತಿ ಜನತೆಗೆ ಇಲ್ಲದೆ ಹಲವಾರು ತಪ್ಪು ಕಲ್ಪನೆಗಳು ಮೂಡುತ್ತಿದೆ ಹಾಗು ಮಾಹಿತಿಯ ಕೊರತೆಯಿಂದಾಗಿ ಜನರು ಆರೋಗ್ಯ ಯೋಜನೆಗಳ ಪ್ರಯೋಜನ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ.ಇದೆಲ್ಲವನ್ನು ಮನಗಂಡು ಆರೋಗ್ಯ ಯೋಜನೆಗಳ ಸರಿಯಾದ ಮಾಹಿತಿಯನ್ನು ಒದಗಿಸಿ ಹೆಚ್ಚಿನ ಜನರು ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳುವಂತಾಗಲು ಈ ಕಾರ್ಯಕ್ರಮ ಆಯೋಜಿಸಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ
ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ
July 20, 2026
10:59 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror