ಸ್ನೇಹ ಭಟ್ ಚೂಂತಾರು ಅವರ ಶಾಸ್ತ್ರೀಯ ಮತ್ತು ಜನಪದ ನೃತ್ಯ ತರಗತಿ ಉದ್ಘಾಟನೆ

January 6, 2020
2:29 PM

ಬೆಳ್ಳಾರೆ: ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ.) ಮಂಗಳೂರು ಹಾಗೂ ವೈಷ್ಣವಿ ನಾಟ್ಯಲಯ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಇವರ ನೃತ್ಯ ನಿರ್ದೇಶನದಲ್ಲಿ ಬೆಳೆದ ಸ್ನೇಹ ಭಟ್ ಚೂಂತಾರು ಇವರ ಶಾಸ್ತ್ರೀಯ ಮತ್ತು ಜನಪದ ನೃತ್ಯ ತರಗತಿಯನ್ನು ಕರ್ನಾಟಕ ತುಳು ಸಾಹಿತ್ಯ ಆಕಾಡೆಮಿ ಅಧ್ಯಕ್ಷರಾದ ದಯಾನಂದ ಕತ್ತಲ್ ಸಾರ್ ದೀಪ ಬೆಳಗಿಸಿ ಉದ್ಘಾಟಿಸಿ ಸ್ನೇಹಳಿಗೆ ಸರಿಯಾದ ಗುರು ಸಿಕ್ಕಿದ್ದಾರೆ ಹಾಗೂ ಒಳ್ಳೆಯ ಗುರಿಯೂ ಇದೆ, ತಾನು ಕಲಿತ ಕಲೆಯನ್ನು ಇನ್ನೊಬ್ಬರಿಗೆ ಕಲಿಸುವ ಮನಸ್ಸು ಮಾಡಿರುವುದು ಹಾಗೂ ಇದಕ್ಕೆ ತನ್ನ ಮನೆಯವರ ಬೆಂಬಲ ಇರುವುದರಿಂದ ನೃತ್ಯ ತರಗತಿಯಲ್ಲಿ ಸಾಧನೆಯನ್ನು ಮಾಡಿ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಬೆಳೆಯಲಿ ಎಂದು ಶುಭ ಹಾರೈಸಿದರು.

Advertisement

ಕಾರ್ಯಕ್ರಮದಲ್ಲಿ ಸ್ನೇಹ ಭಟ್ ಚೂಂತಾರು ಇವರು ತಮ್ಮ ಗುರುಗಳಾದ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಇವರಿಗೆ ಗುರುವಂದನೆಯನ್ನು ಸಲ್ಲಿಸಿದರು. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ.) ಮಂಗಳೂರು ಇದರ ಗೌರವ ಅಧ್ಯಕ್ಷರಾದ ಚೂಂತಾರು ಲಕ್ಷ್ಮೀ ನಾರಾಯಣ ಭಟ್ ಗೌರವ ಉಪಸ್ಥಿತರಾಗಿದ್ದರು. ಚೂಂತಾರು ಸರೋಜಿನಿ ಭಟ್ ಪ್ರತಿಷ್ಠಾನ (ರಿ.) ಮಂಗಳೂರು ಇದರ ಟ್ರಸ್ಟಿಯಾದ  ಮಹೇಶ್ ಭಟ್ ಚೂಂತಾರು ಸ್ವಾಗತಿಸಿದರು.  ಸ್ನೇಹ ಭಟ್ ಧನ್ಯವಾದ ಸಲ್ಲಿಸಿದರು. ಕಾರ್ಯದರ್ಶಿಯಾದ ಮುರಳಿ ಮೋಹನ್ ಚೂಂತಾರು ಕಾರ್ಯಕ್ರಮ ನಿರೂಪಿಸಿದರು.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror