ಸ್ನೇಹ ಶಾಲೆಯಲ್ಲಿ ವಿಭಿನ್ನವಾಗಿ ಶಿಕ್ಷಕರ ದಿನಾಚರಣೆ ಆಚರಿಸಿದ ವಿದ್ಯಾರ್ಥಿಗಳು

September 4, 2019
8:48 PM

ಸುಳ್ಯ: ವಿದ್ಯೆ ಕಲಿಸಿದ ಗುರುವಿಗೆ ಮೊದಲ ವಂದನೆ ಸಲ್ಲಿಸಿ ಶಿಕ್ಷಕರ ದಿನಾಚರಣೆಯನ್ನು ಆಚರಿಸುವ ಮೂಲಕ ಸುಳ್ಯದ ಸ್ನೇಹ ಶಾಲೆ ವಿದ್ಯಾರ್ಥಿಗಳು ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿಸಿದರು.

ಶಿಕ್ಷಕರ ದಿನಾಚರಣೆಯಂದು ಶಾಲೆಗೆ ರಜೆ ನೀಡಿ ವಿದ್ಯಾರ್ಥಿಗಳನ್ನು ಬಿಟ್ಟು ಮಾಡುವ ಆಚರಣೆಗಿಂತ ಭಿನ್ನವಾಗಿ ಸುಳ್ಯದ ಸ್ನೇಹ ಶಾಲೆಯಲ್ಲಿ ಶಿಕ್ಷಕ ವೃಂದದವರನ್ನು ಗೌರವಿಸಲಾಯಿತು. ಶಿಕ್ಷಕಿಯರನ್ನು ವೇದಿಕೆಯಲ್ಲಿ ಕೂರಿಸಿ ವಿದ್ಯಾರ್ಥಿನಿಯರು ಆರತಿ ಎತ್ತಿ, ಪುಷ್ಪ ನೀಡಿ, ಅರಸಿನ ಕುಂಕುಮ ಹಚ್ಚಿ ವಂದನೆ ಮಾಡಿದರು.ಈ ಸಂದರ್ಭದಲ್ಲಿ ಹೆತ್ತವರೂ ಭಾಗವಹಿಸಿದ್ದು ಮಾತೆಯರೂ ಮುಂದೆ ಬಂದು ಶಿಕ್ಷಕರಿಗೆ ಆರತಿ ಎತ್ತಿದರು. ಶಾಲಾ ಆಡಳಿತ ಮಂಡಳಿಯ ವತಿಯಿಂದ ಶಿಕ್ಷಕ ವೃಂದದ ಎಲ್ಲರಿಗೂ ಪುಸ್ತಕಗಳ ಉಡುಗೊರೆ ನೀಡಲಾಯಿತು.

 

ಈ ಸಂದರ್ಭದಲ್ಲಿ ಮಾತಾಡಿದ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆ, ಶಿಕ್ಷಕರ ದಿನಾಚರಣೆಯನ್ನು ಮಕ್ಕಳು, ಹೆತ್ತವರು ಮತ್ತು ಆಡಳಿತ ಮಂಡಳಿಯರು ಮಾಡಬೇಕೆಂಬ ತಮ್ಮ ಚಿಂತನೆಯಂತೆ ಈ ಬಾರಿ ವಿಶಿಷ್ಟವಾಗಿ ಆಚರಿಸಿದ್ದೇವೆ ಎಂದರು.

ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಗಿರೀಶ ಭಾರದ್ವಾಜ ಮಾತನಾಡಿ ಶಿಕ್ಷಕರ ಆಶೀರ್ವಾದವಿದ್ದರೆ ಯಾವುದೇ ಸಂಕೀರ್ಣ ಸಂದರ್ಭಗಳನ್ನೂ ನಿಭಾಯಿಸಲು ಸಾಧ್ಯವೆಂದು ಹೇಳಿದರು.

ಶಾಲಾ ಸಂಚಾಲಕರಾದ ಡಾ. ವಿದ್ಯಾಶಾಂಭವ ಪಾರೆ ಮಾತನಾಡಿ ಕಲಿತು ಕಲಿಸುವ ಗುರುಗಳಿಂದಷ್ಟೇ ಸೃಜನಶೀಲ ಶಿಕ್ಷಣ ನೀಡಲು ಸಾಧ್ಯ. ಅಂತಹ ಶಿಕ್ಷಣ ನೀಡುವುದೇ ನಮ್ಮ ಗುರಿ ಎಂದರು.

ಗುರುವಂದನೆ ಕಾರ್ಯಕ್ರಮಕ್ಕೆ ಮೊದಲು ಶಾಲಾ ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ದಾಮ್ಲೆಯವರು ಶಿಕ್ಷಕ-ರಕ್ಷಕರ ಸಭೆಯನ್ನು ನಡೆಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ
ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ
July 5, 2026
11:09 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ
July 5, 2026
10:43 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror