ಸುಳ್ಯ: ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗದಿಂದ ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದರಿಸುವ ಬಗ್ಗೆ ‘ಲಿಖಿತ ಕ್ವಿಜ್ ಕಾಂಪಿಟಿಷನ್’ ಏರ್ಪಡಿಸಲಾಗಿತ್ತು. ವಿವಿಧ ಕಾಲೇಜುಗಳ ಸುಮಾರು 200 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲ ಡಾ. ಅಚ್ಚುತ ಪೂಜಾರಿ. ಕೆ. ಉದ್ಘಾಟಿಸಿದರು. ರಾಜ್ಯಶಾಸ್ತ್ರದ ಉಪನ್ಯಾಸಕಿ ಡಾ. ಜಯಶ್ರೀ ಕೆ., ವಿದ್ಯಾರ್ಥಿ ಕ್ಷೇಮ ಪಾಲನ ಸಂಘದ ಸಂಚಾಲಕ ಪ್ರೋ. ಸತೀಶ್, ಇತಿಹಾಸ ಉಪನ್ಯಾಸಕಿ ಸುಮಲತಾ ಉಪಸ್ಥಿತರಿದ್ದರು.
ಇತಿಹಾಸ ವಿಭಾಗದ ಮುಖ್ಯಸ್ಥ ಶಿವಾನಂದ ಜಿ ಸ್ವಾಗತಿಸಿ, ವಿದ್ಯಾರ್ಥಿನಿ ರಶ್ಮಿತಾ ಬಿ ನಿರೂಪಿಸಿದರು. ಬೇಬಿ ಕೆ ಹಾಗೂ ಸೌಮ್ಯ ಪ್ರಾರ್ಥನೆ ಹಾಡಿದರು. ಉಪನ್ಯಾಸಕಿ ಸುಮಲತಾ ವಂದಿಸಿದರು.
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel