ಸ್ವಚ್ಛ ಬೆಳ್ಳಾರೆ ಹಾಗೂ ಡೆಂಘೆ , ಕ್ಷಯರೋಗ ಜಾಗೃತಿ ಕಾರ್ಯಕ್ರಮ:

August 4, 2019
12:34 PM

ಬೆಳ್ಳಾರೆ : ಪ್ರಾಥಮಿಕ ಆರೋಗ್ಯ ಕೇಂದ್ರ, ಬೆಳ್ಳಾರೆ, ರೋಟರಿ ಕ್ಲಬ್ ಬೆಳ್ಳಾರೆ ಟೌನ್, ಜೆ.ಸಿ.ಐ. ಬೆಳ್ಳಾರೆ ಹಾಗೂ ಡಾ| ಕೆ. ಶಿವರಾಮ ಕಾರಂತ ಪ್ರ.ದರ್ಜೆ ಕಾಲೇಜು ಬೆಳ್ಳಾರೆಯ ಸಮಾಜ ಕಾರ್ಯ ವಿಭಾಗಗಳ ಸಹಭಾಗಿತ್ವದಲ್ಲಿ ಸ್ವಚ್ಛ ಬೆಳ್ಳಾರೆ, ಡೆಂಘೆ , ಕ್ಷಯರೋಗಗಳ ಜಾಗೃತಿ ಕಾರ್ಯಕ್ರಮವು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿತು.

Advertisement
Advertisement

ಸಂಪನ್ಮೂಲ ವ್ಯಕ್ತಿಯಾಗಿ ಪೆರ್ಲಂಪಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯ ಡಾ| ಅಮಿತ್‍ ಅವರು ಮಾತನಾಡಿ, ಡೆಂಘೆ ಕಾಯಿಲೆಗೆ ನಿರ್ದಿಷ್ಟ ಔಷಧಿವಿರುವುದಿಲ್ಲ. ಜಾಲತಾಣಗಳಲ್ಲಿ ನಮೂದಿಸಿರುವ ಔಷಧಗಳ ಬಗ್ಗೆ ಯಾವುದೇ ಭರವಸೆಯಿಲ್ಲ. ಜ್ವರ ಇತ್ಯಾದಿ ಕಾಯಿಲೆಗಳಿಗೆ ವೈದ್ಯರ ಭೇಟಿ ಮಾಡಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ ಎಂದು ಕರೆ ಇತ್ತರು.

ಆರೋಗ್ಯ ಕೇಂದ್ರದ ವೈದ್ಯೆ ಡಾ| ಅಶ್ವಥಿ, ಮಾತನಾಡಿ ಕಾಯಿಲೆ ಹಬ್ಬದಂತೆ, ಪರಿಸರವನ್ನು ಸ್ವಚ್ಛವಾಗಿಸುವ ಬಗ್ಗೆ ಜಾಗೃತಿ ಮೂಡಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರೋಟರಿ ಕ್ಲಬ್ ಟೌನ್‍ನ ಅಧ್ಯಕ್ಷ ಬಿ. ನರಸಿಂಹ ಜೋಶಿ ಮಾತನಾಡಿ, ಡೆಂಗ್ಯೂ ಇನ್ನಿತರ ಮಾರಕ ಕಾಯಿಲೆಗಳ ಬಗ್ಗೆ ಪ್ರತಿಯೊಬ್ಬರೂ ಸೂಕ್ತ ಮಾಹಿತಿ ಪಡಕೊಂಡು ಆರೋಗ್ಯವಂತ ಸಮಾಜವನ್ನು ಕಟ್ಟಲು ಸಹಕರಿಸಬೇಕೆಂದು ಕೋರಿದರು.

ಬೆಳ್ಳಾರೆ ಗ್ರಾ.ಪಂ. ಸದಸ್ಯ ಮಹಮ್ಮದ್ ಆರೀಫ್‍ ಅವರು ‘ಸ್ವಚ್ಛ ಬೆಳ್ಳಾರೆ’ಯ ಕನಸನ್ನು ನನಸಾಗಿಸಲು ಪ್ರತಿಯೊಬ್ಬರೂ ಸಹಕರಿಸುವಂತೆ ಮನವಿ ಮಾಡಿದರು.

ಜೆ.ಸಿ.ಐ.ನ ಅಧ್ಯಕ್ಷ ಲೋಕೇಶ್ ತಂಟೆಪ್ಪಾಡಿ ಸ್ವಾಗತಿಸಿ ಕ್ಷಯರೋಗ ನಿರ್ಮೂಲನೆ ಬಗ್ಗೆ ಮಾಹಿತಿ ನೀಡಿದರು. ರೋಟರಿ ಕ್ಲಬ್‍ನ ಕಾರ್ಯದರ್ಶಿ ಗೋಪಾಲಕೃಷ್ಣ ಪಿ. ಯಸ್. ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್‍ನ ಶ್ಯಾಮಸುಂದರ ರೈ, ಏ.ಕೆ. ಮಣಿಯಾಣಿ, ಐತ್ತಪ್ಪ ಗೌಡ ಕಾವಿನಮೂಲೆ, ಸೀತಾರಾಮ ನೆಟ್ಟಾರು, ಜೆ.ಸಿ.ಐ.ನ ಪ್ರಸಾದ್ ಸೇವಿತ ಉಪಸ್ಥಿತರಿದ್ದರು.

ಕೇಂದ್ರದ ಆಶಾ ಕಾರ್ಯಕರ್ತೆಯರು, ಕಾಲೇಜಿನ ಸಮಾಜ ಸೇವಾ ಕಾರ್ಯದ ವಿದ್ಯಾರ್ಥಿಗಳು ಹಾಗೂ ಸಂಘಟನೆಗಳ ಸದಸ್ಯರು, ಸ್ವಚ್ಛ ಬೆಳ್ಳಾರೆಯ ಅಂಗವಾಗಿ ಪೇಟೆಯ ಇಕ್ಕೆಲೆಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ, ಇನ್ನಿತ್ತರ ಕಸಗಳನ್ನು ವಿಲೇವಾರಿ ಮಾಡಿ ಸ್ವಚ್ಛತೆಗೈದರು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ
February 14, 2026
7:55 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror