ಸ್ವಚ್ಛತಾ ಕಾರ್ಯ ಒಂದು ದಿನದ್ದಲ್ಲ, ಅದು ನಿರಂತರ

April 28, 2019
4:28 PM

ಸುಬ್ರಹ್ಮಣ್ಯ: ಸ್ವಚ್ಛತಾ ಕಾರ್ಯ ಎನ್ನುವುದು ಒಬ್ಬರದ್ದು, ಒಂದು ಸಂಘಟನೆಯದ್ದು ಮಾತ್ರವೇ ಅಲ್ಲ. ಅದು ಎಲ್ಲರ ಜವಾಬ್ದಾರಿ ಹಾಗೂ ಅದು ನಿರಂತರ.. ಹೀಗೆಂದು ಎಚ್ಚರಿಸಿದ್ದು ಎಂದು ರಾಜ್ಯ ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ಅವರು ಕುಕ್ಕೆಸುಬ್ರಹ್ಮಣ್ಯದಲ್ಲಿ ಎರಡು ದಿನಗಳ ಕಾಲ ಯುವ ಬ್ರಿಗೇಡ್ ವತಿಯಿಂದ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನಡೆದ #ಕುಮಾರ_ಸಂಸ್ಕಾರ ನದಿ ಸ್ವಚ್ಛತಾ ಆಂದೋಲನದ ಬಳಿಕ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಯುವಸಮಾಜವು ಯಾವತ್ತೂ ಸಮಾಜಮುಖಿಯಾಗಿ ಯೋಚನೆ ಮಾಡಬೇಕು. ಇದರಿಂದ ಗ್ರಾಮಗಳ ಅಭಿವೃದ್ಧಿ ಸಾಧ್ಯ.ಯಾವುದೇ ಗ್ರಾಮಗಳ ಅಭಿವೃದ್ಧಿಗೆ ಜಲಮೂಲ ಅತ್ಯಗತ್ಯ.ಜಲಮೂಲದ ನದಿಗಳ ಸಂರಕ್ಷಣೆಗೆ ಯುವ ಜನಾಂಗ ಕಠಿಬದ್ದವಾಗಬೇಕು ಎಂದರು.
ಸ್ವಚ್ಛತಾ ಕಾರ್ಯ ಎನ್ನುವುದು ಒಂದು ದಿನದ್ದು ಆಗಬಾರದು, ಅದು ನಿರಂತರವಾಗಿರಬೇಕು. ಹಾಗಾದಾಗ ನದಿಯನ್ನು ಉಳಿಸಬಹುದು.ಸ್ಥಳಿಯರು ನದಿ ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಬೇಕು ಎಂದರು.

ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಗ್ರಾ.ಪಂ.ಅಧ್ಯಕ್ಷೆ ಸುಶೀಲಾ ಹೊಸಮನೆ, ಜೇಸಿಸ್ ವಲಯಾಧಿಕಾರಿ ರವಿಕಕ್ಕೆಪದವು, ಗ್ರಾ.ಪಂ.ಸದಸ್ಯ ಪ್ರಶಾಂತ್ ಭಟ್ ಮಾಣಿಲ, ಪಿಡಿಓ ಮುತ್ತಪ್ಪ, ನಮ್ಮ ಸುಬ್ರಹ್ಮಣ್ಯ ಯುವ ಬಳಗದ ರಮೇಶ್ ಭಟ್, ಸೂರ್ಯ ಭಟ್, ಅನಂತ ವೇದಿಕೆಯಲ್ಲಿದ್ದರು.ಯುವ ಬ್ರಿಗೇಡ್ ಸದಸ್ಯರು, ಸಹೋದರಿ ನಿವೇದಿತಾ ಪ್ರತಿಷ್ಠಾನದ ಸದಸ್ಯರು, ನಮ್ಮ ಸುಬ್ರಹ್ಮಣ್ಯ ಯುವ ಬಳಗದ ಸದಸ್ಯರು ಮತ್ತು ಇತರ ಸಂಘ ಸಂಸ್ಥೆಗಳ ಸದಸ್ಯರು ಉಪಸ್ಥಿತರಿದ್ದರು.

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಬಾರ ಮಂಡಳಿಯ ದರ ಪಟ್ಟಿಯಲ್ಲಿ ಶಿರಸಿಯ ಕಾಳುಮೆಣಸು ನಮೂದಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ
March 13, 2025
11:10 PM
by: The Rural Mirror ಸುದ್ದಿಜಾಲ
ಹೆತ್ತವರವನ್ನು ನೋಡಿಕೊಳ್ಳದ ಮಕ್ಕಳ ದಾನಪತ್ರ ರದ್ದುಗೊಳಿಸುವ ಅವಕಾಶ ಕಾನೂನಿನಲ್ಲಿದೆ | ಸಚಿವ ಕೃಷ್ಣಭೈರೇಗೌಡ
March 13, 2025
11:05 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 13-03-2025 | ಕೆಲವು ಕಡೆ ತುಂತುರು- ಸಾಮಾನ್ಯ ಮಳೆ ಸಾಧ್ಯತೆ |
March 13, 2025
1:56 PM
by: ಸಾಯಿಶೇಖರ್ ಕರಿಕಳ
ಸೂಚನೆಯೇ ಇಲ್ಲದೆ ನಿನ್ನೆಯ ಮಳೆ ಸುರಿದದ್ದು ಹೇಗೆ..? | ಕರಾವಳಿ ಜಿಲ್ಲೆಯಲ್ಲಿ ಸುರಿದ ಬೇಸಿಗೆ ಮಳೆ ಎಷ್ಟು…? | ಮೊದಲ ಮಳೆ 100 ಮಿಮೀ ದಾಟಿತ್ತು…! |
March 13, 2025
11:58 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror