ಸ್ವಸ್ಥ ಬದುಕಿಗೆ ನಿಯಮಗಳ ಪಾಲನೆ ಅಗತ್ಯ – ವೃತ್ತ ನಿರೀಕ್ಷಕ ನವೀನಚಂದ್ರಜೋಗಿ

February 20, 2020
12:32 PM

ಸುಳ್ಯ: ಚಾಲ್ತಿಯಲ್ಲಿರುವ ಯಾವುದೇ ಕಾನೂನನ್ನು ಮೀರಿ ಮಾಡಿದ ಕೃತ್ಯ ಅಥವಾ ಘಟನೆ ಅಪರಾಧವೆನಿಸುತ್ತದೆ. ಹಾಗಾಗಿ ಸ್ವಸ್ಥ ಬದುಕಿಗೆ ನಿಯಮಗಳ ಪಾಲನೆ ಅಗತ್ಯ ಎಂದು ಸುಳ್ಯ ವೃತ್ತ ನಿರೀಕ್ಷಕ ನವೀನ್‍ಚಂದ್ರ ಜೋಗಿ ಅಭಿಪ್ರಾಯ ವ್ಯಕ್ತಪಡಿಸಿದರು.

Advertisement
Advertisement

ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್‍ಕ್ರಾಸ್ ಘಟಕದ ವತಿಯಿಂದ ಹಮ್ಮಿಕೊಂಡ ಅಪರಾಧ ತಡೆ ಮಾಹಿತಿ ಮತ್ತು ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ದಿನದಲ್ಲಿ ಅಪರಾಧಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಯಾವ ವ್ಯಕ್ತಿಗೆ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದಕ್ಕೆ ಅಡೆತಡೆಯಾಗುವುದೋ ಆಗ ಅಪರಾಧಗಳು ಪ್ರಾರಂಭವಾಗುತ್ತವೆ. ಎಲ್ಲರೂ ಪ್ರಯತ್ನಪಟ್ಟರೆ ಅಪರಾಧ ಪ್ರಕರಣವನ್ನು ತಡೆಗಟ್ಟಬಹುದು. ಹಾಗಾಗಿ ಅದರ ಬಗ್ಗೆ ಮಾಹಿತಿ ಪಡೆಯಬೇಕಾದ ಅಗತ್ಯವಿದೆ ಎಂದರು.

ಸುಬ್ರಹ್ಮಣ್ಯ ಪೋಲೀಸ್ ಠಾಣೆಯ ಪೋಲೀಸ್ ಕಾನ್ಸ್ ಟೇಬಲ್ ಭೀಮನಗೌಡ ಬಿರಾದಾರ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕ ಶ್ರೀಧರ್ ವಿ, ರೆಡ್‍ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತೇಜಸ್ವಿನಿ ಮತ್ತು ಮೌನ ಪ್ರಾರ್ಥಿಸಿದರು. ಮೌನವಿ ಸ್ವಾಗತಿಸಿ, ಮೌನ ವಂದಿಸಿದರು. ಕಾವ್ಯಾ ಕೆ ಡಿ ಕಾರ್ಯಕ್ರಮ ನಿರೂಪಿಸಿದರು. ಮಾಹಿತಿ ಕಾರ್ಯಕ್ರಮದ ನಂತರ ಸಂವಾದ ಚರ್ಚೆ ನಡೆಯಿತು.

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ವಿಶ್ವ ಪರಿಸರ ದಿನ | ಈ ವರ್ಷ ಪ್ಲಾಸ್ಟಿಕ್ ಮಾಲಿನ್ಯ ಕಡಿಮೆಗೊಳಿಸಲು ವಿಶೇಷ ಗಮನ
June 6, 2025
7:05 AM
by: ದ ರೂರಲ್ ಮಿರರ್.ಕಾಂ
ಧನ ಲಕ್ಷ್ಮಿ ಯೋಗದಿಂದ ಹೆಜ್ಜೆ ಹೆಜ್ಜೆಗೂ ಲಾಭ ಹೇಗೆ..? ಯಾರಿಗೆ..?
June 6, 2025
6:45 AM
by: ದ ರೂರಲ್ ಮಿರರ್.ಕಾಂ
ವಿಶ್ವ ಪರಿಸರ ದಿನಾಚರಣೆ | ಪ್ರಧಾನಿ ನರೇಂದ್ರ ಮೋದಿ ಭಾಗಿ  | 700 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಅರಣ್ಯೀಕರಣ ಯೋಜನೆಗೆ ಚಾಲನೆ |
June 5, 2025
10:07 PM
by: The Rural Mirror ಸುದ್ದಿಜಾಲ
ವಿಶ್ವ ಪರಿಸರ ದಿನ | ರಾಜ್ಯದೆಲ್ಲೆಡೆ ಪ್ಲಾಸ್ಟಿಕ್ ಮುಕ್ತ ಅಭಿಯಾನ
June 5, 2025
9:54 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group