ಸ್ವಸ್ಥ ಬದುಕಿಗೆ ನಿಯಮಗಳ ಪಾಲನೆ ಅಗತ್ಯ – ವೃತ್ತ ನಿರೀಕ್ಷಕ ನವೀನಚಂದ್ರಜೋಗಿ

February 20, 2020
12:32 PM

ಸುಳ್ಯ: ಚಾಲ್ತಿಯಲ್ಲಿರುವ ಯಾವುದೇ ಕಾನೂನನ್ನು ಮೀರಿ ಮಾಡಿದ ಕೃತ್ಯ ಅಥವಾ ಘಟನೆ ಅಪರಾಧವೆನಿಸುತ್ತದೆ. ಹಾಗಾಗಿ ಸ್ವಸ್ಥ ಬದುಕಿಗೆ ನಿಯಮಗಳ ಪಾಲನೆ ಅಗತ್ಯ ಎಂದು ಸುಳ್ಯ ವೃತ್ತ ನಿರೀಕ್ಷಕ ನವೀನ್‍ಚಂದ್ರ ಜೋಗಿ ಅಭಿಪ್ರಾಯ ವ್ಯಕ್ತಪಡಿಸಿದರು.

ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಯುವ ರೆಡ್‍ಕ್ರಾಸ್ ಘಟಕದ ವತಿಯಿಂದ ಹಮ್ಮಿಕೊಂಡ ಅಪರಾಧ ತಡೆ ಮಾಹಿತಿ ಮತ್ತು ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂದಿನ ದಿನದಲ್ಲಿ ಅಪರಾಧಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಯಾವ ವ್ಯಕ್ತಿಗೆ ವ್ಯಕ್ತಿತ್ವವನ್ನು ರೂಪಿಸಿಕೊಳ್ಳುವುದಕ್ಕೆ ಅಡೆತಡೆಯಾಗುವುದೋ ಆಗ ಅಪರಾಧಗಳು ಪ್ರಾರಂಭವಾಗುತ್ತವೆ. ಎಲ್ಲರೂ ಪ್ರಯತ್ನಪಟ್ಟರೆ ಅಪರಾಧ ಪ್ರಕರಣವನ್ನು ತಡೆಗಟ್ಟಬಹುದು. ಹಾಗಾಗಿ ಅದರ ಬಗ್ಗೆ ಮಾಹಿತಿ ಪಡೆಯಬೇಕಾದ ಅಗತ್ಯವಿದೆ ಎಂದರು.

Advertisement

ಸುಬ್ರಹ್ಮಣ್ಯ ಪೋಲೀಸ್ ಠಾಣೆಯ ಪೋಲೀಸ್ ಕಾನ್ಸ್ ಟೇಬಲ್ ಭೀಮನಗೌಡ ಬಿರಾದಾರ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಿದರು. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕ ಶ್ರೀಧರ್ ವಿ, ರೆಡ್‍ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿ ಡಾ.ಅನುರಾಧಾ ಕುರುಂಜಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತೇಜಸ್ವಿನಿ ಮತ್ತು ಮೌನ ಪ್ರಾರ್ಥಿಸಿದರು. ಮೌನವಿ ಸ್ವಾಗತಿಸಿ, ಮೌನ ವಂದಿಸಿದರು. ಕಾವ್ಯಾ ಕೆ ಡಿ ಕಾರ್ಯಕ್ರಮ ನಿರೂಪಿಸಿದರು. ಮಾಹಿತಿ ಕಾರ್ಯಕ್ರಮದ ನಂತರ ಸಂವಾದ ಚರ್ಚೆ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ
June 26, 2026
1:15 PM
by: ದ ರೂರಲ್ ಮಿರರ್.ಕಾಂ
ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”
June 26, 2026
12:52 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ
June 25, 2026
8:41 PM
by: ಅರುಣ್‌ ಕುಮಾರ್ ಕಾಂಚೋಡು
ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ
June 25, 2026
8:17 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror