ಹಿಂಜಾವೇ ಕಾರ್ಯಕರ್ತ ಕಾರ್ತಿಕ್ ಸುವರ್ಣ ಸವಿನೆನಪಲ್ಲಿ ಪ್ರತಿ ತಿಂಗಳು ಆಹಾರ ಧಾನ್ಯ ನೀಡುವ ಯೋಜನೆಗೆ ಚಾಲನೆ

October 18, 2019
8:56 PM

ಪುತ್ತೂರು: ಸಾಮಾಜಿಕ, ಧಾರ್ಮಿಕ ಕಾರ್ಯದ ಮೂಲಕ ಗುರುತಿಸಿಕೊಂಡಿರುವ ಉದ್ಯಮಿ, ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ಮುಖ್ಯಸ್ಥರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರಿಂದ ಪ್ರೇರಣೆಗೊಂಡ ಯುವಕರು ರಚಿಸಿದ ಅಶೋಕ್ ಕುಮಾರ್ ರೈ ಅಭಿಮಾನಿ ಬಳಗ ಎ.ಆರ್ ವಾರಿಯರ್ಸ್‌ ಮೂಲಕ ಇತ್ತೀಚೆಗೆ ಮೃತಪಟ್ಟ ಹಿಂಜಾವೇ ಕಾರ್ಯಕರ್ತ ಕಾರ್ತಿಕ್ ಸುವರ್ಣ ಮೇರ್ಲರ ಸವಿನೆನಪುಗಳ ಜೊತೆಗೆ ಪ್ರತಿ ತಿಂಗಳು ಒಂದು ಅಶಕ್ತ ಕುಟುಂಬಕ್ಕೆ ಆಹಾರ ಧಾನ್ಯ ನೀಡುವ ಯೋಜನೆಯ ಪ್ರಥಮ ಹಂತವಾಗಿ ಕಳೆದ ಕೆಲ ದಿನಗಳ ಹಿಂದೆ ಅಪಘಾತದಲ್ಲಿ ಮೃತಪಟ್ಟ ಪುತ್ತೂರು ತಾಲೂಕಿನ ಬೀರಾವು ನಿವಾಸಿ ಹರೀಶ್ ಅವರ ಮನೆಗೆ ಆಹಾರ ಧಾನ್ಯಗಳನ್ನು ಎ.ಆರ್ ವಾರಿಯರ್ಸ್‌ ನ ಸದಸ್ಯರು ಒದಗಿಸಿದರು.

Advertisement
Advertisement

ಈ ಸಂದರ್ಭದಲ್ಲಿ ಪ್ರಜ್ವಲ್ ರೈ ಸವಣೂರು, ಧನು ಪಟ್ಲ ಕಲ್ಲೇಗ, ಕಮಲ್ ಕುಲಾಲ್, ಸುಜಿತ್ ಬಂಗೇರ ಸಂಟ್ಯಾರ್, ಪ್ರಜನ್ ರೈ ತೊಟ್ಲ, ಭರತ್ ಶೆಟ್ಟಿ, ರಾಕೇಶ್ ಈಶ್ವರಮಂಗಲ, ಮನೋಜ್ ಸಂಟ್ಯಾರ್ ಉಪಸ್ಥಿತರಿದ್ದರು. ಎ ಆರ್ ವಾರಿಯರ್ಸ್‌ ಬಳಗದ ಮೂಲಕ ಇತ್ತೀಚೆಗೆ ನೂರಾರು ಯುವಕರು ಸೇರಿ ನೆರೆ ಪೀಡಿತ ಪ್ರದೇಶವಾದ ಬೆಳ್ತಂಗಡಿ ತಾಲೂಕಿನ ದಿಡುಪೆಯಲ್ಲಿ ಶ್ರಮದಾನ ಕಾರ್ಯ ಮಾಡಿತ್ತು.

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಶುಕ್ರವಾರ ಮಹಾಲಕ್ಷ್ಮಿಯ ಈ ಮಂತ್ರವನ್ನು ಭಕ್ತಿಯಿಂದ ಪಠಿಸಿದರೆ ಹಣದ ಸಮಸ್ಯೆ ನಿವಾರಣೆ
June 20, 2025
7:13 AM
by: ದ ರೂರಲ್ ಮಿರರ್.ಕಾಂ
60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |
June 19, 2025
10:59 PM
by: The Rural Mirror ಸುದ್ದಿಜಾಲ
ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ
June 19, 2025
10:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group