*ಹುಚ್ಚನು ನಾನಲ್ಲ…* 

May 3, 2019
7:30 AM
ಹುಟ್ಟಿದಾಗ ಹುಚ್ಚನು ನಾನಲ್ಲ..
ನನ್ನಂತ ಸುಖಿ ಬೇರಾರು ಇರಲಿಲ್ಲ..
ಕಣ್ಣಿಗೆ ಕಂಡದ್ದನ್ನೇ ಸತ್ಯ ಅಂದುಕೊಂಡೆ ನಾನು
ಸುಖವೂ ಹೋಗಿ ದುಃಖ ಬಂತು ಮೋಸ ಹೋದೆ ನಾನು ||1||
ಜನರಾರು ಸೇರಿಸಲಿಲ್ಲ ಅವರ ಹತ್ತಿರ ನನ್ನನು
ಬೀದಿಯಲ್ಲಿ ಹುಚ್ಚನಾಗಿ ಅಲೆದಾಡಿದೆ ನಾನು
ನಾಯಿತಿಂದುಳಿದ ಆಹಾರವೇ ಮೃಷ್ಟಾನ್ನವೆಂದುಕೊಂಡೆ
ಹರಕಲು‌‌ಗೋಣಿಯಿಂದ ಮಾನ ಮುಚ್ಚಿಕೊಂಡೆ ||2||
ಹುಟ್ಟುತ್ತಾ ನಾನು ಹುಚ್ಚನಲ್ಲ,ಜನ ನನ್ನ ಹುಚ್ಚ ಅಂದ್ರು
ನನ್ನವರೇ ನನ್ನ ಬೀದಿಗಟ್ಟಿ, ಇದೇ ನಿನ್ನ ಜಾಗ ಅಂದ್ರು
ಪುಟಾಣಿ ಮಕ್ಕಳು‌‌ ನನ್ನ ನೋಡಿ ಕಲ್ಲು ಹೊಡೆದು ಬಿಟ್ರು
ಹಣೇಲಿ ಸುರಿದ ರಕ್ತ ನೋಡಿ,ಜನ ಕೇಕೇ ಹಾಕಿ ನಕ್ರು ||3||
ಹುಟ್ಟುತ್ತಾ ನಾನು ಹುಚ್ಚನಲ್ಲ,ನಿಮ್ಮಂತೆ ನಾನಿದ್ದೆ ಅಂದೆ
ಯಾರಿಗೂ ನನ್ನ ಮಾತು ಕೇಳಲೇ ಇಲ್ಲ
ಧಾರಕಾರ ಸುರಿದ  ಮಳೆಯಲಿ ಕಣ್ಣೀರು ಕೂಡಿ ಹೋಯ್ತು
ಒಂದಿಬ್ಬರು ಸಾಂತ್ವಾನ ಕೇಂದ್ರ ಸೇರಿಸಿ ಬಿಟ್ರು ||4||
ಹುಚ್ಚನಾದ ನಾನು ಮತ್ತೆ ಎಲ್ಲರಂತಾಗಿ ಬಿಟ್ಟೆ
ಜನ ಮತ್ತೆ ನನ್ನ ಸೇರಿಸ್ಕೋತಾರೆ ಅಂದುಕೊಂಡು ಬಿಟ್ಟೆ
ಎಲ್ರೂ ಮತ್ತೆ ಹುಚ್ಚ ಎಂದು ಕರೆದು ಬಿಟ್ರು
ಹುಚ್ಚ ಅನ್ನೋ ಹೆಸರೇ ನನಗೆ ಖಾಯಂ ಆಗೋಯ್ತು… ||5||
‌‌
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಹೊಸರುಚಿ | ಎಳೆಯ ಹಲಸಿನ ಕಾಯಿ ರೋಲ್ – ಕ್ರಿಸ್ಪಿ ಟೀ ಟೈಮ್ ಸ್ನ್ಯಾಕ್
March 21, 2026
5:00 PM
by: ದಿವ್ಯ ಮಹೇಶ್
ಕೌಶಲ್ಯಾಭಿವೃದ್ಧಿ ಮತ್ತು ಸ್ವಾವಲಂಬನೆ : ಯುವಜನತೆಗೆ ಕಾಲದ ಕರೆಯೇ?
March 20, 2026
8:07 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!
March 14, 2026
8:05 PM
by: ದ ರೂರಲ್ ಮಿರರ್.ಕಾಂ
ಯುವಶಕ್ತಿ ದಿಕ್ಕುತಪ್ಪದಿರಲು ಹಿರಿಯರ ಮಾರ್ಗದರ್ಶನವೇ ದೀಪಸ್ತಂಭ
March 13, 2026
7:02 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror