ಹೊರಡುವ ಮುನ್ನ

June 1, 2019
12:00 PM
ಪ್ರೀತಿಸಿದವಳ ಜೊತೆ ನಡೆದವಳು
ಎದೆ ಹಾಲನುಣಿಸಿದವಳ ಮರೆತಳು
ತಂದೆಯ ಪ್ರೀತಿಯನ್ನು ಕಡೆಗಣಿಸಿದವಳು
ಇನಿಯನ ಪ್ರೀತಿಯೇ ಹೆಚ್ಚೆಂದಳು ||೧||
ಹೆತ್ತವರಿಗೆ ಮಗಳು ತೊರೆದ ನೋವು
ಸುತ್ತಣದವರ ಚುಚ್ಚು ಮಾತಿನ ನೋವು
ಕಾಣಲಿಲ್ಲ ಅವಳಿಗೆ ಹೆತ್ತೆವರ ಕಣ್ಣೀರು
ಅವಳಿಗೀಗ ಅವನ ಪ್ರೀತಿಯೇ ಎಳನೀರು ||೨||
ಜಗವ ಸುತ್ತಿಸಿದ ಪ್ರೇಮಿಯ ಕೈ ಖಾಲಿಯಾಗಿದೆ
ದುಡಿವ ಅನಿವಾರ್ಯತೆ ಬದುಕಲ್ಲಿ ಎದುರಾಗಿದೆ
ಶ್ರಮಕ್ಕೆ ತಕ್ಕ ಪ್ರತಿಫಲ ದೊರಕದಾಗಿದೆ
ಮನೆಯಲ್ಲಿ ಜಗಳವೀಗ ಶುರುವಾಗಿದೆ ||೩||
ಆಕೆಯೀಗ ತುಂಬು ಗರ್ಭವತಿ
ಅವನಿಗಿಲ್ಲ ಅವಳಲ್ಲಿ ಮೊದಲಿನಂತೆ ಪ್ರೀತಿ
ಅವಳ ಬಾಳಾಗಿದೆ ಇಂದು ಅವನ ಕೈಸೆರೆ
ಅವಳಿಗೀಗ ಬೇಕಿದೆ ಹೆತ್ತವರ ಒಲವಿನಾಸರೆ ||೪||
ಮನವಿನಿಂದು ತಪ್ಪಿಗಾಗಿ ಮರುಗುತಿದೆ
ಹೆತ್ತವರ ಆಸರೆಗಾಗಿ ಪರಿತಪಿಸುತ್ತಿದೆ
ಕ್ಷಮೆಕೋರಲು ಮನವಿಂದು ಕಾಯುತಿದೆ
ಮಾಡಿದ ತಪ್ಪು ಮನವನ್ನು ಚುಚ್ಚುತ್ತಿದೆ ||೫||
ಪ್ರೀತಿಸುವ ಮುನ್ನ ಯೋಚಿಸಬೇಕು ಕಂದಾ
ಹೆತ್ತವರ ಒಪ್ಪಿಸಿ ನಡೆದರೆ ಆನಂದಾ
ಮುತ್ತಿನ ಮತ್ತಿನಿಂದೆ ನೀ‌ ಹೊರಡಬೇಡ
ತುತ್ತನ್ನು ಕಡೆಗಣಿಸಿ ನಡೆಯಬೇಡ ||೬||

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು
February 20, 2025
7:14 AM
by: ಡಾ.ಚಂದ್ರಶೇಖರ ದಾಮ್ಲೆ
ಸೀತೆ ಪುನೀತೆ | ಅಪೂರ್ಣ ರಾಮಾಯಣ
February 12, 2025
9:44 PM
by: ಡಾ.ಚಂದ್ರಶೇಖರ ದಾಮ್ಲೆ
ದೆಹಲಿ ಚುನಾವಣೆ “ರಾಜಕೀಯ ಅಹಂಕಾರ”ಕ್ಕೆ ಉತ್ತರ | ರಚನಾತ್ಮಕ ವಿಪಕ್ಷವಾಗಿ ಕೆಲಸ ಮಾಡಬಹುದೇ ಎಎಪಿ..?
February 8, 2025
9:29 PM
by: ಮಹೇಶ್ ಪುಚ್ಚಪ್ಪಾಡಿ
ಅಡಿಕೆಯ ಹಳದಿ ಎಲೆ ರೋಗದ ಖಾಯಂ ನಿವಾರಣೆಗಾಗಿ ಯೋಜನೆ ಅನುಷ್ಟಾನಗೊಳ್ಳುತ್ತದೆ ಎಂಬ ಭರವಸೆ ಇರಲಿ
February 7, 2025
12:15 AM
by: ರಮೇಶ್‌ ದೇಲಂಪಾಡಿ

You cannot copy content of this page - Copyright -The Rural Mirror